Gruha Arogya Yojana ರಾಜ್ಯದ ಎಲ್ಲಾ ನಾಗರಿಕರಿಗೂ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ” ಗೃಹ ಆರೋಗ್ಯ” ಎಂಬ ಯೋಜನೆಯನ್ನು ಜಾರಿಗೆ ತರಲಾಗಿದೆ.
ಕರ್ನಾಟಕ ರಾಜ್ಯದಲ್ಲಿ ವಾಸಿಸುವ ಎಲ್ಲಾ ಗ್ರಾಮದ ಮನೆ ಮನೆಗಳಿಗೂ ಭೇಟಿ ನೀಡಿ, ಆರೋಗ್ಯ ತಪಾಸಣೆಯನ್ನು ನಡೆಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ರಾಜ್ಯದಲ್ಲಿ ವಾಸಿಸುವ ಪ್ರತಿ ಕುಟುಂಬಕ್ಕೆ ಭೇಟಿ ನೀಡಿ, 30 ವರ್ಷಕ್ಕಿಂತ ಹೆಚ್ಚಿನ ವಯಸ್ಸಾದಂತವರನ್ನ ತಪಾಸಣೆಗೆ ಒಳಪಡಿಸುವುದು. ಸಾಂಕ್ರಾಮಿಕ ಅಲ್ಲದ ರೋಗಗಳ ತಪಾಸಣೆ ನಡೆಸುವುದು, ಅಗತ್ಯವಿದ್ದರೆ ಔಷಧಿಗಳನ್ನು ನೀಡುವುದು, ಅಗತ್ಯವಾದ ಚಿಕಿತ್ಸೆಗೆ ಸಹಕರಿಸುವ ಯೋಜನೆಯನ್ನು ರಾಜ್ಯಾದ್ಯಂತ ಬಿಡುಗಡೆ ಮಾಡಲಾಗಿದೆ. ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯ ನೇತೃತ್ವದಲ್ಲಿ ಗೃಹ ಆರೋಗ್ಯ ಯೋಜನೆ ಕಾರ್ಯನಿರ್ವಹಿಸುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ. ವಿಕಾಸಸೌಧ ದಲ್ಲಿ ನಡೆದಿರುವಂತಹ ಕಾರ್ಯಕ್ರಮದಲ್ಲಿ ಯೋಚನೆಯನ್ನು ಕುರಿತು ಅಧಿಕಾರಿಗಳಿಗೆ ತರಬೇತಿ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಚಿವರು ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡಲು ಆದೇಶಿಸಿದ್ದಾರೆ. ಇದರಿಂದ ಗ್ರಾಮ ಮಟ್ಟದಲ್ಲಿ ಹಳ್ಳಿ ಹಳ್ಳಿಯಲ್ಲಿ ವಾಸಿಸುವಂತಹ ನಾಗರಿಕರಿಗೆ ಆರೋಗ್ಯ ಸೇವೆ ದೊರೆಯಲಿದೆ. ಈ ಲೇಖನದಲ್ಲಿ ನಾವು ಗೃಹ ಆರೋಗ್ಯ ಯೋಜನೆಯ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ದಯವಿಟ್ಟು ಲೇಖನವನ್ನು ಪೂರ್ತಿಯಾಗಿ ಓದಿ.
Gruha Arogya Yojana : ಗೃಹ ಆರೋಗ್ಯ ಯೋಜನೆಯ ಸಂಪೂರ್ಣ ಮಾಹಿತಿ.

ಸರ್ಕಾರದ ಜನಪರ ಕಲ್ಯಾಣ ಯೋಜನೆಗಳಲ್ಲಿ ಗೃಹ ಆರೋಗ್ಯ ಯೋಜನೆ ಒಂದಾಗಿದೆ. ರಾಜ್ಯದಲ್ಲಿ ವಾಸಿಸುವ ಜನರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಕರ್ನಾಟಕ ರಾಜ್ಯದ ಆರೋಗ್ಯ ಇಲಾಖೆಯ ನೇತೃತ್ವದಲ್ಲಿ ಈ ಯೋಜನೆಯನ್ನು ಮನೆ ಮನೆಗಳಿಗೂ ತಲುಪಿಸುವ ಮುಖ್ಯ ಉದ್ದೇಶವನ್ನು ಹೊಂದಲಾಗಿದೆ ಎಂದು ಆರೋಗ್ಯ ಸಚಿವರು ಭರವಸೆಯನ್ನು ನೀಡಿದ್ದಾರೆ.
- ಇಲಾಖೆ ಹೆಸರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ.
- ಯೋಜನೆ ಹೆಸರು : ಗೃಹ ಆರೋಗ್ಯ(Gruha Arogya).
- ಉದ್ದೇಶ : ಆರೋಗ್ಯ ಸೌಲಭ್ಯ ನೀಡುವುದು.
- ಕಾರ್ಯಗಳು : ತಪಾಸಣೆ,ಔಷಧಿ, ಚಿಕಿತ್ಸೆ ನೀಡುವುದು.
- ಸೌಲಭ್ಯ : 30 ವರ್ಷ ಮೇಲ್ಪಟ್ಟವರಿಗೆ.
2024ರಲ್ಲಿ ಈ ಯೋಜನೆಯನ್ನು ಕೋಲಾರ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತರಲಾಗಿತ್ತು. ಗ್ರಾಮ ಮಟ್ಟದಲ್ಲಿ ಮತ್ತು ಹಳ್ಳಿ ಹಳ್ಳಿಯಲ್ಲಿ ಉತ್ತಮ ಸ್ಪಂದನೆ ದೊರಕಿದ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯಾದ್ಯಂತ ವಿಸ್ತರಿಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.
Important Massages : ಪ್ರತಿ ದಿನ ಟ್ರೆಂಡಿಂಗ್ ನ್ಯೂಸ್ ಮತ್ತು ಸರ್ಕಾರಿ ಯೋಜನೆಗಳು ಹಾಗೂ ಹೊಸ ಉದ್ಯೋಗ ಮತ್ತು ಹೊಸ ಸಿನಿಮಾ ಬಗ್ಗೆ ಮಾಹಿತಿಯನ್ನು ಪಡೆಯಲು ದಯವಿಟ್ಟು ನಮ್ಮ “Tharak7star Whatsapp Group Join Now” ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
Gruha Arogya Yojana : ಗೃಹ ಆರೋಗ್ಯ ಯೋಜನೆಯ ಉದ್ದೇಶಗಳು.
ಕರ್ನಾಟಕ ಸರ್ಕಾರದ ಕಲ್ಯಾಣ ಯೋಜನೆಗಳಲ್ಲಿ ಒಂದಾಗಿರುವ ಗೃಹ ಆರೋಗ್ಯ ಯೋಜನೆಯ (Gruha Arogya Yojana) ಮುಖ್ಯ ಉದ್ದೇಶ ಮನೆ ಮನೆಗಳಿಗೆ ತೆರಳಿ ಆರೋಗ್ಯ ತಪಾಸಣೆ ನಡೆಸುವುದಾಗಿದೆ.
- ಮನೆ ಮನೆಗಳಿಗೆ ತೆರಳಿ 30 ವರ್ಷ ಮೇಲ್ಪಟ್ಟವರಿಗೆ ಆರೋಗ್ಯ ತಪಾಸಣೆ ನಡೆಸುವುದು.
- ಸಾಂಕ್ರಾಮಿಕವಲ್ಲದ ರೋಗಗಳ ತಪಾಸಣೆ ನಡೆಸುವುದು.
- ಅಗತ್ಯವಿರುವವರಿಗೆ ಉಚಿತ ಔಷಧಿಗಳನ್ನು ನೀಡುವುದು.
- ಅವಶ್ಯಕತೆ ಇರುವವರಿಗೆ ಅವರ ಚಿಕಿತ್ಸೆಗೆ ನೆರವಾಗುವುದು.
- ಆರೋಗ್ಯ ಸಮಸ್ಯೆಯಿಂದ ಅಕಾಲಿಕ ಮರಣ ಹೊಂದುವುದನ್ನು ತಡೆಯುವುದು.
- ಹೆಚ್ಚಿನ ಚಿಕಿತ್ಸೆ ಅಗತ್ಯ ಇರುವ ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸುವುದು.
ಉಚಿತವಾಗಿ ಆರೋಗ್ಯ ತಪಾಸಣೆ ಮಾಡುವುದರ ಜೊತೆಗೆ ಅಗತ್ಯ ಇರುವಂತಹ ಕಡುಬಡವರಿಗೆ ಉಚಿತ ಔಷಧಿಯನ್ನು ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಕೋಲಾರ ಜಿಲ್ಲೆಯಲ್ಲಿ ಮೊದಲಿಗೆ ಪ್ರಾರಂಭ ಆದಂತಹ (Gruha Arogya Yojana) ಯೋಜನೆಗೆ, ಜಿಲ್ಲೆಯ ಜನರಿಂದ ಉತ್ತಮ ರೀತಿಯಲ್ಲಿ ಸ್ಪಂದನೆ ಸಿಕ್ಕಿರುವುದರಿಂದ ಬಡತನ ರೇಖೆಗಿಂತ ಕೆಳಗಿರುವ ಜನರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಯೋಜನೆಯನ್ನು ವಿಸ್ತರಿಸಲು ತೀರ್ಮಾನಿಸಲಾಗಿದೆ. ಹೆಚ್ಚಿನ ಮಾಹಿತಿಯನ್ನು ಪಡೆಯಲು ಅರೋಗ್ಯ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಬಹುದು. ಅರೋಗ್ಯ ಇಲಾಖೆಯ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಇಲ್ಲಿ ಕ್ಲಿಕ್ ಮಾಡಿ.
ಗ್ರಾಮೀಣ ಪ್ರದೇಶಗಳಲ್ಲಿ ಸಮುದಾಯ ಆರೋಗ್ಯ ಅಧಿಕಾರಿಗಳು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತರು ಮತ್ತು ಸ್ವಯಂಸೇವಕರು ಇವರುಗಳ ಸಹಾಯದಿಂದ ಮನೆ ಮನೆಗಳಿಗೆ ತೆರಳಿ ಆರೋಗ್ಯ ತಪಾಸಣೆಯನ್ನು ನಡೆಸುವುದು. ಯಾವುದೇ ಕಾಯಿಲೆಯನ್ನು ಮೊದಲೇ ಪತ್ತೆ ಹಚ್ಚುವುದು. ಅಗತ್ಯವಿದ್ದರೆ ಔಷಧಿ ಮತ್ತು ಚಿಕಿತ್ಸೆ ನೆಡುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. 2025 26 ನೇ ಸಾಲಿನಲ್ಲಿ ಆರು ಸಾಂಕ್ರಾಮಿಕವಲ್ಲದ ರೋಗಗಳನ್ನು ಪತ್ತೆಹಚ್ಚಲು ಯೋಜನೆಗೆ ಹೆಚ್ಚಿನ ಆರ್ಥಿಕ ಸಹಾಯ ಮಾಡಲಾಗಿದೆ.
2025 26 ನೇ ಸಾಲಿನ ಬಜೆಟ್ ನಲ್ಲಿ ಸುಮಾರು 100 ಕೋಟಿ ವೆಚ್ಚದಲ್ಲಿ “ಗೃಹ ಆರೋಗ್ಯ” ಯೋಜನೆಯನ್ನು ವಿಸ್ತರಿಸಲು ತೀರ್ಮಾನಿಸಲಾಯಿತು. ಮುಂದುವರೆದು ಸುಮಾರು 14 ರೋಗಗಳ ತಪಾಸನೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ. ಅದಕ್ಕೆ ಬೇಕಾಗುವಂತಹ ಆರ್ಥಿಕ ಸಹಾಯವನ್ನು ಸರ್ಕಾರ ಮಾಡಲು ನಿರ್ಧರಿಸಿದೆ. ಪ್ರಸ್ತುತ ರಾಜ್ಯದ ಜನಸಂಖ್ಯೆಯಲ್ಲಿ ಶೇಕಡ 26.9ಕ್ಕೂ ಹೆಚ್ಚಿನ ಜನರಲ್ಲಿ ರಕ್ತದೊತ್ತಡ ಇರುವುದು ಪತ್ತೆಯಾಗಿದೆ. ಹಾಗೆಯೇ ಶೇಕಡ 15.6ಕ್ಕಿಂತ ಜಾಸ್ತಿ ಜನರು ಮಧುಮೇಹದಿಂದ ಬಳಲುತ್ತಿದ್ದಾರೆ ಎಂಬುದು ಆರೋಗ್ಯ ಇಲಾಖೆಯ ಸಮೀಕ್ಷೆಯ ಮುಖಾಂತರ ತಿಳಿದುಬಂದಿದೆ.
ಕರ್ನಾಟಕ ರಾಜ್ಯದಲ್ಲಿ ಅನೇಕ ರೀತಿಯ ಕಾಯಿಲೆಗಳಿಂದ ಜನರು ಬಳಲುತ್ತಿದ್ದಾರೆ. ಬಾಯಿ ಕ್ಯಾನ್ಸರ್, ಸ್ತನ ಕ್ಯಾನ್ಸರ್ ಮತ್ತು ರಕ್ತದೊತ್ತಡ ಹಾಗೂ ಮಧುಮೇಹ ಸಕ್ಕರೆ ಕಾಯಿಲೆಗಳು ಅತಿ ಹೆಚ್ಚು ಜನರಲ್ಲಿ ಕಂಡುಬಂದಿದೆ.ಇದನ್ನು ಗಮನದಲ್ಲಿ ಇಟ್ಟುಕೊಂಡ ಸರ್ಕಾರ Gruha Arogya Yojana ಎಂಬ ಮಹತ್ವದ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ತೀರ್ಮಾನಿಸಿತು. ಗ್ರಾಮೀಣ ಸಮುದಾಯ ಕೇಂದ್ರಗಳು ರಕ್ತದೊತ್ತಡ ಮತ್ತು ಮಧುಮೇಹ ಕಾಯಿಲೆಗಳನ್ನು ಪತ್ತೆ ಹಚ್ಚುವುದನ್ನು ನಿರ್ಲಕ್ಷಿಸಿದೆ. ಹಾಗಾಗಿ ಈ ಯೋಜನೆಯ ಮೂಲಕ ಮನೆಗಳಲ್ಲಿ ಇರುವ 30 ವರ್ಷ ಮೇಲ್ಪಟ್ಟವರನ್ನು ತಪಾಸಣೆ ನಡೆಸಿ ಚಿಕಿತ್ಸೆ ನೀಡಲಾಗುವುದು.
ಆರೋಗ್ಯ ಇಲಾಖೆ ಮತ್ತು ಸಮುದಾಯ ಕೇಂದ್ರದ ಸಿಬ್ಬಂದಿಗಳು, ವಾರದಲ್ಲಿ ಸುಮಾರು ನಾಲ್ಕು ದಿನಗಳ ಕಾಲ ಮನೆಮನೆಗೆ ತೆರಳಿ ಆರೋಗ್ಯ ತಪಾಸಣೆ ನಡೆಸಬೇಕು. ಪ್ರತಿ ಸಿಬ್ಬಂದಿ ಮಂಗಳವಾರ,ಬುಧವಾರ, ಶುಕ್ರವಾರ ಮತ್ತು ಶನಿವಾರ ಈ ದಿನಗಳಲ್ಲಿ ಪ್ರತಿದಿನ 15 ಮನೆಗಳನ್ನು ಪರಿಶೀಲಿಸುತ್ತಾರೆ. ತಪಾಸಣೆ ನಡೆಸುವಾಗ ಗರ್ಭಕಂಠದ ಮತ್ತು ಸ್ತನ ಕ್ಯಾನ್ಸರ್ಗಳ ಮೌಲ್ಯಮಾಪನವನ್ನು ಮಾಡುತ್ತಾರೆ ಎಂದು ಆರೋಗ್ಯ ಇಲಾಖೆಯ ಮುಖ್ಯ ಅಧಿಕಾರಿಗಳು ತಿಳಿಸಿದ್ದಾರೆ. ಮನೆಗಳಲ್ಲಿ ಪ್ರತಿ ರೋಗಿಯ 14 ತರಹದ ರೋಗಗಳನ್ನು ಸಮುದಾಯ ಆರೋಗ್ಯ ಅಧಿಕಾರಿಗಳು ತಪಾಸಣೆ ನಡೆಸಲಿದ್ದಾರೆ.
ಆರೋಗ್ಯ ಇಲಾಖೆಯ ಈ ಯೋಜನೆ ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ, ಹಳ್ಳಿ ಹಳ್ಳಿಯಲ್ಲಿ ವಾಸಿಸುವ ಜನರಿಗೆ ಆರೋಗ್ಯ ಸೌಲಭ್ಯವನ್ನು ನೀಡುತ್ತದೆ. ಅಕಾಲಿಕವಾಗಿ ಮರಣ ಹೊಂದುವುದನ್ನು ತಪ್ಪಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ. ಒಟ್ಟಿನಲ್ಲಿ ದೇಶದಲ್ಲಿ ವಾಸಿಸುವ ಜನರ ಆರೋಗ್ಯವನ್ನು ಕಾಪಾಡುವ ದೃಷ್ಟಿಯಿಂದ ಸರ್ಕಾರ Gruha Arogya Yojana ಯನ್ನು ರಾಜ್ಯಾದ್ಯಂತ ವಿಸ್ತರಿಸಲು ತೀರ್ಮಾನಿಸಿದೆ. ಇದರಿಂದ ಅನೇಕ ಜನರಿಗೆ ಸಹಾಯವಾಗಲಿದೆ. ಬಡತನ ರೇಖೆಗಿಂತ ಕೆಳಗಿ ವಾಸಿಸುವ ಜನರಿಗೆ, ಕಡು ಬಡವರಿಗೆ ಹಾಗೂ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ ವರ್ಗಗಳಿಗೆ ಹೆಚ್ಚಿನ ಅನುಕೂಲವಾಗಲಿದೆ.
ಗೃಹ ಆರೋಗ್ಯ ಯೋಜನೆಯಿಂದ ಬಡತನದಲ್ಲಿ ವಾಸಿಸುವ ಎಲ್ಲಾ ಜನರಿಗೂ ಉತ್ತಮ ಆರೋಗ್ಯ ಸೇವೆ ದೊರೆಯಲಿದೆ. ಈಗಿನ ಕಾಲದಲ್ಲಿ ಹೆಚ್ಚಿನದಾಗಿ ವಯಸ್ಕರೂ ರಕ್ತದೊತ್ತಡ ಮತ್ತು ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಹಾಗಾಗಿ ಈ ಯೋಜನೆಯ ಮೂಲಕ ತಪಾಸಣೆ ನಡೆಸುವುದರಿಂದ ಹೃದಯಾಘಾತದಿಂದ ಸಾಯುವ ವಯಸ್ಕರನ್ನು ರಕ್ಷಿಸಿದಂತಾಗುತ್ತದೆ. ಮಧ್ಯಮ ವಯಸ್ಸಿನ ಜನರಲ್ಲಿ ಹೆಚ್ಚಾಗಿ ಹೃದಯ ಸಂಬಂಧಿ ಕಾಯಿಲೆಗಳು ಕಾಣಿಸಿಕೊಳ್ಳುತ್ತಿವೆ.
ವಿಶೇಷ ಸೂಚನೆ : “Tharak7starnews15.com” ವೆಬ್ಸೈಟ್ ನಲ್ಲಿ ಯಾವುದೇ ರೀತಿಯ ಸುಳ್ಳು ಮಾಹಿತಿಯನ್ನು ಪ್ರಕಟಿಸುವುದಿಲ್ಲ. ಅಧಿಕೃತ, ಉಪಯುಕ್ತ ಮಾಹಿತಿಯನ್ನು ಮಾತ್ರ ಪ್ರಕಟಿಸಲಾಗುವುದು. ವಂದನೆಗಳು.