Ration card : ರಾಜ್ಯ ಸರ್ಕಾರ ರೇಷನ್ ಕಾರ್ಡ್ ಹೊಂದಿರುವವರಿಗೆ ಅಕ್ಕಿ ಬದಲಾಗಿ ಪರ್ಯಾಯ ವಸ್ತು ನೀಡಲು ಮಹತ್ವದ ಕ್ರಮ ಕೈಗೊಂಡಿದೆ.
ಕರ್ನಾಟಕ ರಾಜ್ಯ ಸರ್ಕಾರವು ಪಡಿತರದಾರರಿಗೆ ಗುಡ್ ನ್ಯೂಸ್ ಕೊಟ್ಟಿದೆ. ಅಕ್ಕಿ ನೀಡುವ ಬದಲು ಮೂರು ಕೆಜಿ ಜೋಳ ಕೊಡುವ ನಿರ್ಧಾರಕ್ಕೆ ಬಂದಿದೆ. ರಾಜ್ಯದಲ್ಲಿ ವಾಸಿಸುವ ಜನರು ಉಪವಾಸ ಇರಬಾರದು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಉತ್ತರ ಕರ್ನಾಟಕ ಜನರು ಹೆಚ್ಚಾಗಿ ಜೋಳದ ರೊಟ್ಟಿ ಮತ್ತು ಮುದ್ದೆ ಉಪಯೋಗ ಮಾಡುತ್ತಿದ್ದು, ಅವರಿಗೆ ಅನುಕೂಲ ಮಾಡುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಮಂತ್ರಿಗಳು ತಿಳಿಸಿದ್ದಾರೆ. ಭಾರತ ದೇಶದಲ್ಲಿ ವಾಸಿಸುವ ಬಡ ಜನರು ಊಟ ಇಲ್ಲದೆ ಹಸಿವಿನಿಂದ ಇರಬಾರದು. ಈ ಲೇಖನದಲ್ಲಿ ನಾವು ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವ ವಿಧಾನ, ಬೇಕಾಗುವ ದಾಖಲೆಗಳು, ಯಾವಾಗ ಅರ್ಜಿ ಸಲ್ಲಿಸಬೇಕು, ಇಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಇದೆ. ರೇಷನ್ ಕಾರ್ಡ್ ಡೌನ್ಲೋಡ್ ಮಾಡೋದು ಹೇಗೆ?, ತಿದ್ದುಪಡಿ ಮಾಡುವ ವಿಧಾನ, ಅಪ್ಲಿಕೇಶನ್ ಸ್ಟೇಟಸ್ ಚೆಕ್ ಮಾಡೋದು ಹೇಗೆ ಎಂಬ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ.
Ration card : What Documents are required for a ration card in karnataka. ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು.

Ration card : ಸರ್ಕಾರ ನಿಗದಿ ಪಡಿಸಿದ ದಿನದಲ್ಲಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಸಲ್ಲಿಕೆ ಮುಕ್ತಾಯಗೊಂಡಿದ್ದು, ಮತ್ತೆ ಅವಕಾಶ ನೀಡುವ ವರೆಗೆ ಕಾಯಬೇಕು. ಹೊಸ ರೇಷನ್ ಕಾರ್ಡ್ ಪಡೆಯಲು ಬೇಕಾಗುವ ಪ್ರಮುಖ ದಾಖಲೆಗಳು ಯಾವುವು ಎಂಬುದನ್ನು ನೋಡೋಣ.
- ಆಧಾರ್ ಕಾರ್ಡ್ (Aadhar Card).
- ಚುನಾವಣಾ ಗುರುತಿನ ಚೀಟಿ (Election Identity Card).
- ಜನನ ಪ್ರಮಾಣ ಪತ್ರ (Birth Certificate).
- ಭಾವ ಚಿತ್ರಗಳು (Pass port photos).
- ಮೊಬೈಲ್ ನಂಬರ್ (Mobile Number).
ಈ ಮೇಲಿನ ದಾಖಲೆಗಳನ್ನು ಹೊಂದಿರುವ ಜನರು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ.
Important Massages : ಪ್ರತಿ ದಿನ ಟ್ರೆಂಡಿಂಗ್ ನ್ಯೂಸ್ ಮತ್ತು ಸರ್ಕಾರಿ ಯೋಜನೆಗಳು ಹಾಗೂ ಹೊಸ ಉದ್ಯೋಗ ಮತ್ತು ಹೊಸ ಸಿನಿಮಾ ಬಗ್ಗೆ ಮಾಹಿತಿಯನ್ನು ಪಡೆಯಲು ದಯವಿಟ್ಟು ನಮ್ಮ “Tharak7star Whatsapp Group Join Now” ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
How to apply ration card in online : ಅರ್ಜಿ ಸಲ್ಲಿಸುವ ವಿಧಾನ.
ಪಡಿತರ ಚೀಟಿ ಪಡೆಯಲು ಅರ್ಜಿ ಸಲ್ಲಿಸುವ ವಿಧಾನವನ್ನು ನೋಡೋಣ. ಹೊಸ ರೇಷನ್ ಕಾರ್ಡ್ ಮತ್ತು ತಿದ್ದುಪಡಿ ಮಾಡುವ ಪಡಿತರ ಚೀಟಿ ಹಾಗೂ APL, BPL ಎಲ್ಲಾ ರೀತಿಯ ration card ಪಡೆಯಲು ಅರ್ಜಿ ಸಲ್ಲಿಸುವ ವಿಧಾನ ಇದೆ ಆಗಿರುತ್ತದೆ.
- ಮೊದಲಿಗೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಬೇಕು.
- ಮುಖಪುಟ ತೆರೆದ ನಂತರ ಇ-ಸೇವೆ ಆಯ್ಕೆ ಮಾಡಬೇಕು.
- ಇ ಸೇವೆ ಮೇಲೆ ಕ್ಲಿಕ್ ಮಾಡಿದಾಗ ಅಪ್ಲಿಕೇಶನ್ ತೆರೆಯುತ್ತದೆ.
- ಆಮೇಲೆ ನಿಮ್ಮ ಆಧಾರ್ ಕಾರ್ಡ್ ನಂಬರ್ ಎಂಟ್ರಿ ಮಾಡಬೇಕು.
- ನಂತರ ಆಧಾರ್ ಕಾರ್ಡ್ ಲಿಂಕ್ ಆದ ಮೊಬೈಲ್ ನಂಬರ್ ಗೆ OTP ಬರುತ್ತದೆ.
- OTP ಅನ್ನು ನಮೂದಿಸಿ. ಮುಂದೆ ಹೋಗಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ.
- ನಂತರ ಇ-ಪಡಿತರ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.
- ಅಪ್ಲಿಕೇಶನ್ ತೆರೆದ ಮೇಲೆ “ಹೊಸ ಪಡಿತರ ಚೀಟಿಗೆ ಅರ್ಜಿ” ಎಂಬ ಲಿಂಕ್ ಕ್ಲಿಕ್ ಮಾಡಿ.
- ಲಿಂಕ್ ಓಪನ್ ಆದಮೇಲೆ APL ಅಥವಾ BPL ಎಂಬುದನ್ನು ಆಯ್ಕೆ ಮಾಡಿ.
- ನಂತರ ನಿಮ್ಮ ಅಪ್ಲಿಕೇಶನ್ ಓಪನ್ ಆಗುತ್ತದೆ.
- ಅಪ್ಲಿಕೇಶನ್ ಓಪನ್ ಆದಮೇಲೆ ನಿಮ್ಮ ವಯಕ್ತಿಕ ವಿವರಗಳನ್ನು ನಮೂದಿಸಿ.
- ನಂತರ ನಿಮ್ಮ ಕುಟುಂಬದ ಸದಸ್ಯರ ಎಲ್ಲಾ ಮಾಹಿತಿಯನ್ನು ನೀಡಬೇಕು.
- ಕುಟುಂಬ ಸದಸ್ಯರ ಆಧಾರ್ ಕಾರ್ಡ್ ಕಡ್ಡಾಯವಾಗಿ ಇರಬೇಕು.
- ಅರ್ಜಿ ನಮೂನೆಯಲ್ಲಿ ಕೇಳಿದ ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
- ನೀಡಿರುವ ಎಲ್ಲಾ ಮಾಹಿತಿ ಸರಿಯಾಗಿ ಇದ್ದರೆ, submit ಬಟನ್ ಮೇಲೆ ಕ್ಲಿಕ್ ಮಾಡಿ.
- ಅರ್ಜಿ ಸಲ್ಲಿಸಿದ ಮೇಲೆ ಅಪ್ಲಿಕೇಶನ್ ಅನ್ನು ಪ್ರಿಂಟ್ ತೆಗೆದುಕೊಳ್ಳಿ.
ಹೀಗೆ ಮೇಲಿನ ಕ್ರಮವನ್ನು ಅನುಸರಿಸಿ ಹೊಸ ration card ಗೆ ಅರ್ಜಿ ಸಲ್ಲಿಸಬಹುದು. ಮುಂದಿನ ದಿನದಲ್ಲಿ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗುವುದು.
Who are eligible for ration card: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು.
ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸುವ ಮೊದಲು ಬೇಕಾದ ಅರ್ಹತೆಗಳನ್ನು ಹೊಂದಿರಬೇಕು.
- ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
- ಪಡಿತರ ಚೀಟಿ ಇರಬಾರದು.
- ಮದುವೆಯಾದವರು ಹೊಸ ಕಾರ್ಡ್ ಪಡೆಯಲು ಅರ್ಜಿ ಹಾಕಬಹುದು.
- ಆದಾಯ ಕಡಿಮೆ ಇರಬೇಕು.
ಇವೆಲ್ಲಾ ಅರ್ಹತೆ ಹೊಂದಿರುವ ನಾಗರೀಕರು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಹೊಸ ಪಡಿತರ ಚೀಟಿ ಅರ್ಜಿ ಯಾವಾಗ ಸಲ್ಲಿಸಬಹುದು ಎಂಬುದನ್ನು, ಸರ್ಕಾರ ಅರ್ಜಿ ಸಲ್ಲಿಕೆ ಪ್ರಾರಂಭ ಮಾಡಿದಾಗ ಮುಂದಿನ ಲೇಖನದಲ್ಲಿ ತಿಳಿಸಲಾಗುವುದು.
How to check my ration card status : ಅರ್ಜಿ ಸ್ಥಿತಿ ತಿಳಿಯೋದು ಹೇಗೆ?.
ಪಡಿತರ ಚೀಟಿ ಪಡೆಯಲು ಅರ್ಜಿ ಸಲ್ಲಿಸಿದ ಮೇಲೆ ಅರ್ಜಿಯ ಸ್ಥಿತಿ ಹೇಗಿದೆ ಎಂಬುದನ್ನು ತಿಳಿಯುವ ವಿಧಾನವನ್ನು ನೋಡೋಣ.
- ಮೊದಲಿಗೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
- ಮುಖಪುಟ ತೆರೆದ ನಂತರ ನಿಮ್ಮ ಆಧಾರ್ ನಂಬರ್ ನಮೂದಿಸಿ.
- ಮೊಬೈಲ್ ನಂಬರ್ ಗೆ ಬರುವ OTP ಅನ್ನು ಎಂಟ್ರಿ ಮಾಡಿ. ಮುಂದೆ ಹೋಗಿ ಎಂಬ ಬಟನ್ ಕ್ಲಿಕ್ ಮಾಡಿ.
- ಆಮೇಲೆ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಬೇಕು.
- ಹಾಗೆ ತಾಲೂಕು ಮತ್ತು ಗ್ರಾಮವನ್ನು ಗುರುತಿಸಬೇಕು.
- ನಂತರ ನಿಮ್ಮ ಹೆಸರು ಆಯ್ಕೆ ಮಾಡಿ.
- ಆಗ ಅಪ್ಲಿಕೇಶನ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಅರ್ಜಿಯ ಸ್ಥಿತಿಯನ್ನು ತಿಳಿದುಕೊಳ್ಳಲು ಸಾಧ್ಯವಿದೆ.
- ಹೀಗೆ ನಿಮ್ಮ ರೇಷನ್ ಕಾರ್ಡ್ ಸ್ಟೇಟಸ್ ಚೆಕ್ ಮಾಡಬಹುದು.
ಭಾರತ ದೇಶದಲ್ಲಿ ವಾಸಿಸುವ ಬಡ ಜನರು ಊಟ ಇಲ್ಲದೆ ಹಸಿವಿನಿಂದ ಇರಬಾರದು. ಹಾಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಹಲವು ಅನೇಕ ರೀತಿಯ ಯೋಜನೆ ಜಾರಿಗೆ ತಂದಿವೆ.
ವಿಶೇಷ ಸೂಚನೆ : “Tharak7starnews15.com” ವೆಬ್ಸೈಟ್ ನಲ್ಲಿ ಯಾವುದೇ ರೀತಿಯ ಸುಳ್ಳು ಮಾಹಿತಿಯನ್ನು ಪ್ರಕಟಿಸುವುದಿಲ್ಲ. ಅಧಿಕೃತ, ಉಪಯುಕ್ತ ಮಾಹಿತಿಯನ್ನು ಮಾತ್ರ ಪ್ರಕಟಿಸಲಾಗುವುದು. ವಂದನೆಗಳು.