Vidyasiri yojana : ವಿದ್ಯಾಸಿರಿ ಯೋಜನೆಯು ವಿದ್ಯಾರ್ಥಿ ವೇತನಕ್ಕೆ ಸಂಬಂದಿಸಿದ ಒಂದು ಮಹತ್ವದ ಯೋಜನೆಯಾಗಿದೆ. ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಸೌಲಭ್ಯ ಪಡೆಯಬಹುದು.
ವಿದ್ಯಾಸಿರಿ ಯೋಜನೆಯನ್ನು ಹಿಂದುಳಿದ ವರ್ಗ ಮಕ್ಕಳ ಉನ್ನತ ಶಿಕ್ಷಣಕ್ಕೆ ಸಹಾಯ ಮಾಡುವ ಉದ್ದೇಶದಿಂದ ಜಾರಿಗೆ ತರಲಾಗಿದೆ. ಅನೇಕ ವಿದ್ಯಾರ್ಥಿಗಳು ಶಿಕ್ಷಣ ಮುಂದುವರೆಸಲು ಹಣದ ಕೊರತೆ ಅನುಭವಿಸುತ್ತಾರೆ. ಗ್ರಾಮೀಣ ಪದೇಶದ ಮಕ್ಕಳು ನಗರ ಪ್ರದೇಶಕ್ಕೆ ಬಂದು ವಿದ್ಯಾಭ್ಯಾಸ ಮಾಡಲು ಊಟ ಮತ್ತು ವಸತಿ ಕೊರತೆ ಇರುತ್ತದೆ. ಹಾಗಾಗಿ ಎಷ್ಟೋ ಮಕ್ಕಳು ತಮ್ಮ ಶಿಕ್ಷಣ ಅರ್ಧಕ್ಕೆ ನಿಲ್ಲಿಸುತ್ತಾರೆ. ಈ ದೃಷ್ಟಿಯಲ್ಲಿ ಸರ್ಕಾರ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ವಿದ್ಯಾಸಿರಿ ಯೋಜನೆಯನ್ನು ಜಾರಿಗೆ ತಂದಿದೆ. ಆಹಾರ ಮತ್ತು ವಸತಿ ವ್ಯವಸ್ಥೆ ಕಲ್ಪಿಸುವ ಮುಖ್ಯ ಉದ್ದೇಶವನ್ನು ಯೋಜನೆ ಹೊಂದಿದೆ. ನಾವು ಈ ಲೇಖನದಲ್ಲಿ ಯೋಜನೆಯ ಸಂಪೂರ್ಣ ಮಾಹಿತಿ ನೀಡಲು ಪ್ರಯತ್ನಿಸಿದ್ದೇವೆ. ವಿದ್ಯಾಸಿರಿ ಯೋಜನೆ ಎಂದರೇನು?, ಯಾರು ಅರ್ಜಿ ಸಲ್ಲಿಸಲು ಅವಕಾಶ ಇದೆ, ಬೇಕಾದ ಪ್ರಮುಖ ದಾಖಲೆಗಳು ಯಾವುವು, ಎಷ್ಟು ವಿದ್ಯಾರ್ಥಿವೇತನ ಸಿಗುತ್ತದೆ. ಅರ್ಜಿ ಸಲ್ಲಿಸುವ ವಿಧಾನ, ಹೇಗೆ, ಎಲ್ಲಿ ಎಂಬ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ.
Vidyasiri yojana : ವಿದ್ಯಾಸಿರಿ ಯೋಜನೆಯ ಸಂಪೂರ್ಣ ಮಾಹಿತಿ.

Vidyasiri yojana : ವಿದ್ಯಾಸಿರಿ ಯೋಜನೆಗೆ ಅರ್ಜಿ ಸಲ್ಲಿಸುವ ಮೊದಲು ಅದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯುವುದು ಮುಖ್ಯ. ಈ ಯೋಜನೆ ಉದ್ದೇಶ ವಿದ್ಯಾರ್ಥಿಗಳಿಗೆ ಆಹಾರ ಮತ್ತು ವಸತಿ ವೆಚ್ಚವನ್ನು ನೀಡುವುದು ಆಗಿದೆ. ಮಕ್ಕಳ ಉನ್ನತ ಶಿಕ್ಷಣಕ್ಕೆ ಪ್ರೊತ್ಸಹ ನೀಡುವುದು. ಹಾಸ್ಟೆಲ್ ನಲ್ಲಿ ಪ್ರವೇಶ ಸಿಗದೇ ಇರುವ ವಿದ್ಯಾರ್ಥಿಗಳಿಗೆ ಈ ವ್ಯವಸ್ಥೆ ಕಲ್ಪಿಸುವುದಾಗಿದೆ.
- ಯೋಜನೆ ಹೆಸರು : ವಿದ್ಯಾಸಿರಿ (Vidyasiri).
- ಉದ್ದೇಶ : ಶಿಕ್ಷಣಕ್ಕೆ ಪ್ರೊತ್ಸಹ ನೀಡುವುದು.
- ವಿದ್ಯಾರ್ಥಿವೇತನ : ವರ್ಷಕ್ಕೆ ರೂ.15,000.
- ಸೌಲಭ್ಯ : ಆಹಾರ ಮತ್ತು ವಸತಿ.
ಒಟ್ಟಿನಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ನೀಡುವುದು. ಅವರಿಗೆ ನಗರ ಪ್ರದೇಶದ ಕಾಲೇಜುಗಳಲ್ಲಿ ಉನ್ನತ ಶಿಕ್ಷಣ ಪಡೆಯಲು ಆರ್ಥಿಕ ಸಹಾಯ ಮಾಡುವುದು.
Important Massages : ಪ್ರತಿ ದಿನ ಟ್ರೆಂಡಿಂಗ್ ನ್ಯೂಸ್ ಮತ್ತು ಸರ್ಕಾರಿ ಯೋಜನೆಗಳು ಹಾಗೂ ಹೊಸ ಉದ್ಯೋಗ ಮತ್ತು ಹೊಸ ಸಿನಿಮಾ ಬಗ್ಗೆ ಮಾಹಿತಿಯನ್ನು ಪಡೆಯಲು ದಯವಿಟ್ಟು ನಮ್ಮ “Tharak7star Whatsapp Group Join Now” ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
Vidyasiri yojana : ವಿದ್ಯಾಸಿರಿ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು.
ವಿದ್ಯಾಸಿರಿ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು ಯಾವುವು ಎಂಬುದನ್ನು ನೋಡೋಣ.
- ಆಧಾರ್ ಕಾರ್ಡ್ (Aadhar Card).
- ಜಾತಿ ಪ್ರಮಾಣ ಪತ್ರ (Caste Certificate).
- ಆದಾಯ ಪ್ರಮಾಣ ಪತ್ರ (Income Certificate).
- ಬ್ಯಾಂಕ್ ಪಾಸ್ ಪುಸ್ತಕ (Bank Passbook).
- ಹಿಂದಿನ ವರ್ಷದಲ್ಲಿ ಅಂಕಪಟ್ಟಿಗಳು(Marks Card).
- ಮೊಬೈಲ್ ನಂಬರ್ (Mobile Number).
ತಿಂಗಳಿಗೆ ರೂ.1500 ವಿದ್ಯಾರ್ಥಿವೇತನ ಪಡೆಯಲು ಈ ಮೇಲಿನ ದಾಖಲೆಗಳು ಕಡ್ಡಾಯವಾಗಿ ಇರಬೇಕು. ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮೆ ಮಾಡಲಾಗುವುದು. ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ವೆಬ್ಸೈಟ್ ಗೆ ಭೇಟಿ ಮಾಡಿ. ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಇಲ್ಲಿ ಕ್ಲಿಕ್ ಮಾಡಿ.
Vidyasiri yojana : ವಿದ್ಯಾಸಿರಿ ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು.
ಸರ್ಕಾರ ಯೋಜನೆಯಿಂದ ಸೌಲಭ್ಯ ಪಡೆಯಲು ಕೆಲವು ಪ್ರಮುಖ ಅರ್ಹತೆಗಳು ಇರಬೇಕು. ಅವುಗಳನ್ನು ನೋಡುವುದಾದರೆ,
- ಭಾರತದಲ್ಲಿ ವಾಸವಾಗಿರಬೇಕು.
- ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
- ಹಿಂದುಳಿದ ವರ್ಗಕ್ಕೆ ಸೇರಿರಬೇಕು.
- ಸರ್ಕಾರದ ಮಾನ್ಯತೆ ಪಡೆದ ಕಾಲೇಜುಗಳಲ್ಲಿ ಪ್ರವೇಶ ಪಡೆದಿರಬೇಕು.
- ಸರ್ಕಾರಿ ಕಾಲೇಜುಗಳಲ್ಲಿ ಓದುತ್ತಿರಬೇಕು.
- ಸರ್ಕಾರದ ಮಾನ್ಯತೆ ಪಡೆದ ಅನುದಾನಿತ ಅಥವಾ ಖಾಸಗಿ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರಬೇಕು.
- ಯಾವುದೇ ಸರ್ಕಾರಿ ಹಾಸ್ಟೆಲ್ ನಲ್ಲಿ ಪ್ರವೇಶ ಪಡೆದಿರಬಾರದು.
ವಾರ್ಷಿಕ ಆದಾಯವು ಹಿಂದುಳಿದ ವರ್ಗಕ್ಕೆ ನಿಗದಿ ಪಡಿಸಿದ ವ್ಯಾಪ್ತಿಯ ಒಳಗೆ ಇರಬೇಕು.
ಈ ಅರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ, ವಿದ್ಯಾರ್ಥಿವೇತನ ಪಡೆಯಬಹುದು.
Vidyasiri yojana : ವಿದ್ಯಾಸಿರಿ ಯೋಜನೆಯ ಪ್ರಯೋಜನಗಳು.
ವಿದ್ಯಾಸಿರಿ ಯೋಜನೆಯ ಪ್ರಯೋಜನಗಳನ್ನು ನೋಡುವುದಾದರೆ, ಅನೇಕ ರೀತಿಯ ಪ್ರಯೋಜನ ಇದೆ. ಗ್ರಾಮೀಣ ಪ್ರದೇಶದಿಂದ ನಗರದಲ್ಲಿ ಕಾಲೇಜುಗಳಿಗೆ ಬರುವ ಮಕ್ಕಳಿಗೆ ಊಟದ ವ್ಯವಸ್ಥೆ ಇರುವುದಿಲ್ಲ. ವಸತಿ ವ್ಯವಸ್ಥೆ ಇರುವುದಿಲ್ಲ. ಹಾಗಾಗಿ ಅನೇಕ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗಿದ್ದಾರೆ.
- ಮುಖ್ಯವಾಗಿ ಊಟ ಮತ್ತು ವಸತಿಗೆ ಹಣಕಾಸಿನ ಸಹಾಯ ನೀಡುವುದು.
- ವರ್ಷಕ್ಕೆ ರೂ.15,000 ವೇತನ ನೀಡುವುದು.
- ತಿಂಗಳಿಗೆ ರೂ. 1,500 ನೀಡಲಾಗುವುದು. ವರ್ಷದಲ್ಲಿ 10 ತಿಂಗಳು ನೀಡಲಾಗುವುದು.
- ಹಿಂದುಳಿದ ವರ್ಗದಲ್ಲಿ ಇರುವ ಮಕ್ಕಳ ಶಿಕ್ಷಣಕ್ಕೆ ನೆರವು.
- ಉತ್ತಮ ರೀತಿಯಲ್ಲಿ ಓದುವ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕೆ ಪ್ರೊತ್ಸಹ ನೀಡುವುದು.
- ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಹಾಕುವುದು.
- ವಿದ್ಯಾರ್ಥಿಗಳ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವುದು.
ಒಟ್ಟಿನಲ್ಲಿ ಹೇಳುವುದಾದರೆ, ಶೈಕ್ಷಣಿಕ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಲು ಸಹಾಯ ಮಾಡುವುದು.
Vidyasiri yojana : ವಿದ್ಯಾಸಿರಿ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ.
ವಿದ್ಯಾಸಿರಿ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಅರ್ಜಿ ಸಲ್ಲಿಸುವ ಸರಿಯಾದ ಕ್ರಮವನ್ನು ನೋಡೋಣ.
- ಮೊದಲಿಗೆ ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
- SSP ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ.
- ಮೊದಲು SSP ಪೋರ್ಟಲ್ ಗೆ ಹೋಗಿ ಹೊಸ ನೊಂದಣಿ ಮಾಡಬೇಕು. ನಿಮ್ಮ ಮೊಬೈಲ್ ನಂಬರ್ ಮತ್ತು ಇಮೇಲ್ ಐಡಿ ನಮೂದಿಸಿ.
- ನಂತರ ಮೊಬೈಲ್ ನಂಬರ್ ಗೆ ಒಂದು OTP ಬರುತ್ತದೆ. ಅದನ್ನು ಎಂಟ್ರಿ ಮಾಡಬೇಕು.
- OTP ಎಂಟ್ರಿ ಮಾಡಿ Submit ಬಟನ್ ಒತ್ತಿದ ಮೇಲೆ ಅಪ್ಲಿಕೇಶನ್ ತೆರೆದುಕೊಳ್ಳುತ್ತದೆ.
- ಅಪ್ಲಿಕೇಶನ್ ನಲ್ಲಿ ಕೇಳಲಾದ ಎಲ್ಲಾ ಅಗತ್ಯ ಮಾಹಿತಿ ನಮೂದಿಸಿ. ನಿಮ್ಮ ವೈಯಕ್ತಿಕ ವಿವರ.
- ನಂತರ ನಿಮ್ಮ ಶೈಕ್ಷಣಿಕ ವಿವರವನ್ನು ಎಂಟ್ರಿ ಮಾಡಿ.
- ಆಮೇಲೆ ನಿಮ್ಮ ಬ್ಯಾಂಕ್ ಖಾತೆ ವಿವರಗಳನ್ನು ನಮೂದಿಸಿ.
- ಎಲ್ಲಾ ಮಾಹಿತಿಯನ್ನು ಸರಿಯಾದ ರೀತಿ ಎಂಟ್ರಿ ಮಾಡಿದ ಮೇಲೆ ಅಗತ್ಯ ಇರುವ ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
- ಕೊನೆಯಲ್ಲಿ ಒಮ್ಮೆ ಎಂಟ್ರಿ ಮಾಡಿದ ಎಲ್ಲಾ ಮಾಹಿತಿಯನ್ನು ಮತ್ತೊಮ್ಮೆ ಪರಿಶೀಲನೆ ಮಾಡಿ. ಆಮೇಲೆ submit ಮಾಡಬೇಕು.
- ಅರ್ಜಿ ಸಲ್ಲಿಸಿದ ಮೇಲೆ ಪ್ರಿಂಟ್ ಓಟ್ ತೆಗೆದುಕೊಳ್ಳಬೇಕು.
- ಸಲ್ಲಿಸಿದ ಅರ್ಜಿ ನಮೂನೆಯನ್ನು, ಕೇಳಿರುವ ಎಲ್ಲಾ ಅಗತ್ಯ ದಾಖಲೆಗಳನ್ನು ಕಾಲೇಜಿನ ಪ್ರಾಂಶುಪಾಲರು ಗೆ ನೀಡಬೇಕು.
ನಂತರ ಎಲ್ಲಾ ಮಾಹಿತಿ ಸರಿಯಾಗಿದ್ದರೆ ಅದನ್ನು ಮುಂದಿನ ಪರಿಶೀಲನೆಗೆ ಕಳುಹಿಸಲಾಗುವುದು. ಹಿಂದುಳಿದ ವರ್ಗದ ಅಧಿಕಾರಿಗಳು ಅರ್ಜಿಗಳನ್ನು ಪರಿಶೀಲನೆ ಮಾಡಿ. ಮೇಲಿನ ಅಧಿಕಾರಿಗಳಿಗೆ ಕಳುಹಿಸುತ್ತಾರೆ. ಸಲ್ಲಿಸಿದ ಎಲ್ಲಾ ದಾಖಲೆಗಳು ಸರಿಯಾಗಿ ಇದ್ದರೆ ಮಾತ್ರ ವಿದ್ಯಾರ್ಥಿವೇತನ ನೀಡಲಾಗುವುದು. ನೇರವಾಗಿ ವಿದ್ಯಾರ್ಥಿಯ ಬ್ಯಾಂಕ್ ಖಾತೆ ಹಣ ಜಮಾ ಮಾಡಲಾಗುವುದು. ಒಟ್ಟಿನಲ್ಲಿ ಶಿಕ್ಷಣಕ್ಕೆ ಮಹತ್ವ ನೀಡುವುದು ಮುಖ್ಯ ಉದ್ದೇಶವಾಗಿದೆ.
ವಿಶೇಷ ಸೂಚನೆ : “Tharak7starnews15.com” ವೆಬ್ಸೈಟ್ ನಲ್ಲಿ ಯಾವುದೇ ರೀತಿಯ ಸುಳ್ಳು ಮಾಹಿತಿಯನ್ನು ಪ್ರಕಟಿಸುವುದಿಲ್ಲ. ಅಧಿಕೃತ, ಉಪಯುಕ್ತ ಮಾಹಿತಿಯನ್ನು ಮಾತ್ರ ಪ್ರಕಟಿಸಲಾಗುವುದು. ವಂದನೆಗಳು.